ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಆಂಧ್ರದ ಗೃಹ ಸಚಿವೆ ಅನಿತಾ, ಸಾರಿಗೆ ಸಚಿವ ರಾಮಮೋಹನ್ ರೆಡ್ಡಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ ಒಳಗೊಂಡ ನಿಯೋಗ ಇಂದು ಬೆಂಗಳೂರಿಗೆ ಆಗಮಿಸಿತ್ತು.
ಶಕ್ತಿ ಯೋಜನೆ ಸಂಬಂಧ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆದುಕೊಂಡಿತು. ಈ ಯೋಜನೆಯಿಂದ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರು ಉತ್ತರಿಸಿ ಶಕ್ತಿ ಯೋಜನೆಯಿಂದ ನಮಗೆಲ್ಲಾ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಬಳಿಕ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡ ನಿಯೋಗ ಶಕ್ತಿ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿತು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…