ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಆಂಧ್ರದ ಗೃಹ ಸಚಿವೆ ಅನಿತಾ, ಸಾರಿಗೆ ಸಚಿವ ರಾಮಮೋಹನ್ ರೆಡ್ಡಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ ಒಳಗೊಂಡ ನಿಯೋಗ ಇಂದು ಬೆಂಗಳೂರಿಗೆ ಆಗಮಿಸಿತ್ತು.
ಶಕ್ತಿ ಯೋಜನೆ ಸಂಬಂಧ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆದುಕೊಂಡಿತು. ಈ ಯೋಜನೆಯಿಂದ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರು ಉತ್ತರಿಸಿ ಶಕ್ತಿ ಯೋಜನೆಯಿಂದ ನಮಗೆಲ್ಲಾ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಬಳಿಕ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡ ನಿಯೋಗ ಶಕ್ತಿ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿತು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…