ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಆಂಧ್ರದ ಗೃಹ ಸಚಿವೆ ಅನಿತಾ, ಸಾರಿಗೆ ಸಚಿವ ರಾಮಮೋಹನ್ ರೆಡ್ಡಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ ಒಳಗೊಂಡ ನಿಯೋಗ ಇಂದು ಬೆಂಗಳೂರಿಗೆ ಆಗಮಿಸಿತ್ತು.
ಶಕ್ತಿ ಯೋಜನೆ ಸಂಬಂಧ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರ ಪ್ರತಿಕ್ರಿಯೆ ಪಡೆದುಕೊಂಡಿತು. ಈ ಯೋಜನೆಯಿಂದ ಎಷ್ಟು ಉಪಯೋಗವಾಗಿದೆ? ಹೇಗೆ ಉಪಯೋಗವಾಗಿದೆ ಎಂಬುದರ ಪ್ರಶ್ನೆಗೆ ಮಹಿಳಾ ಪ್ರಯಾಣಿಕರು ಉತ್ತರಿಸಿ ಶಕ್ತಿ ಯೋಜನೆಯಿಂದ ನಮಗೆಲ್ಲಾ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಬಳಿಕ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡ ನಿಯೋಗ ಶಕ್ತಿ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…