ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು.
ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಕಳೆದ ವರ್ಷವೇ ಮೆನು ಬದಲಾವಣೆ ಮಾಡಿ ಪೌಷ್ಟಿಕ ಆಹಾರ ನೀಡುವಂತೆ ಹೈಕೋರ್ಟ್ ನೀಡಿದ ಆದೇಶ ಎತ್ತಿ ಹಿಡಿದಿತ್ತು.
ಐಸಿಡಿಎಸ್ ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಹೊಸ ಮೆನು ನೀಡಲಾಗುತ್ತಿದೆ. ಅನ್ನ ಸಾಂಬಾರ್, ಅನ್ನ ಕಿಚಿಡಿ, ಉಪ್ಪಿಟ್ಟು ನೀಡುತ್ತಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ 25 ಗ್ರಾಂ ತೂಕದ ಗೋಧಿ ಲಾಡು, ಸಿರಿ ಧಾನ್ಯದ ಲಾಡು ವಿತರಣೆ ಮಾಡಲಾಗುವುದು, ಪ್ರತಿ ಮಾನ್ಯ ಮಗುವಿಗೆ 8 ರೂಪಾಯಿ, ಅಪೌಷ್ಟಿಕ ಮಗುವಿಗೆ 12 ರೂಪಾಯಿ ವೆಚ್ಚವಾಗಲಿದೆ.
ಆರು ತಿಂಗಳಿಂದ ಮೂರು ವರ್ಷದ ಮಗುವಿಗೆ ಮನೆಯಲ್ಲಿಯೇ ತಿನ್ನಿಸಲು ಅನುಕೂಲವಾಗುವಂತೆ ಬೆಲ್ಲ ರಹಿತ ಮತ್ತು ಬೆಲ್ಲ ಸಹಿತವಾಗಿ ಸಿಹಿ ತಿಂಡಿ ನೀಡಲಾಗುವುದು ಎಂದು ಹೇಳಲಾಗಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…