ರಾಜ್ಯ

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ವಿಧಾನ ಪರಿಷತ್‌ ಕಲಾಪದಲ್ಲಿ ಶುಕ್ರವಾರ(ಜು.19) ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್‌ ಜಬ್ಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ ಎಂದರು.

ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು, ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದರು.

ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ
ಪೌಷ್ಠಿಕ ಆಹಾರ ಯೋಜನೆಯಡಿ ಅಕ್ಕಿ, ಗೋಧಿಯನ್ನು ಕೇಂದ್ರ ಸರ್ಕಾರದ ಎಫ್‌.ಸಿ.ಐ ಮೂಲಕ, ಹಾಲಿನ ಪುಡಿಯನ್ನು ಕೆ.ಎಂ.ಎಫ್‌ ಮೂಲಕ ಖರೀದಿಸಲಾಗುತ್ತಿದೆ. ಕೋಳಿಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಥಳೀಯವಾಗಿ ಖರೀದಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಹೇಮಲತಾ ನಾಯಕ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 49 ವರ್ಷ ಇತಿಹಾಸ ಹೊಂದಿರುವ ರಾಜ್ಯದ ಅಂಗನವಾಡಿಯಲ್ಲಿ ಇದುವರೆಗೂ ಅಹಿತಕರ ಘಟನೆ ವರದಿಯಾಗಿಲ್ಲ. ನಾನೇ ಖುದ್ದು ಕೆಲವೊಂದು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದರು.

ಪೌಷ್ಠಿಕ ಆಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಒಂದು ಮಗುವಿಗೆ 8 ರೂಪಾಯಿಯಂತೆ ನಿಗದಿಪಡಿಸಿದೆ. ಕಳೆದ 9 ವರ್ಷಗಳಿಂದ ಈ ಮೊತ್ತವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿಲ್ಲ. ಈ ಮೊತ್ತದಲ್ಲೇ ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದೆ ಎಂದರು.

2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ಸೃಷ್ಠಿ ಎಂಬ ಯೋಜನೆ ಆರಂಭಿಸಿ, ಪೌಷ್ಠಿಕ ಆಹಾರ ನೀಡುವ ಸಲುವಾಗಿ ಮಕ್ಕಳಿಗೆ ಮೊಟ್ಟೆ ನೀಡಲು ತೀರ್ಮಾನಿಸಿತು. ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ ಕೆಲವೊಂದು ಕೇಂದ್ರಗಳಲ್ಲಿ ಸಮಸ್ಯೆಗಳು ಬಂದಿದ್ದು, ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago