ರಾಜ್ಯ

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ವಿಧಾನ ಪರಿಷತ್‌ ಕಲಾಪದಲ್ಲಿ ಶುಕ್ರವಾರ(ಜು.19) ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್‌ ಜಬ್ಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ ಎಂದರು.

ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು, ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದರು.

ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ
ಪೌಷ್ಠಿಕ ಆಹಾರ ಯೋಜನೆಯಡಿ ಅಕ್ಕಿ, ಗೋಧಿಯನ್ನು ಕೇಂದ್ರ ಸರ್ಕಾರದ ಎಫ್‌.ಸಿ.ಐ ಮೂಲಕ, ಹಾಲಿನ ಪುಡಿಯನ್ನು ಕೆ.ಎಂ.ಎಫ್‌ ಮೂಲಕ ಖರೀದಿಸಲಾಗುತ್ತಿದೆ. ಕೋಳಿಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಥಳೀಯವಾಗಿ ಖರೀದಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಹೇಮಲತಾ ನಾಯಕ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 49 ವರ್ಷ ಇತಿಹಾಸ ಹೊಂದಿರುವ ರಾಜ್ಯದ ಅಂಗನವಾಡಿಯಲ್ಲಿ ಇದುವರೆಗೂ ಅಹಿತಕರ ಘಟನೆ ವರದಿಯಾಗಿಲ್ಲ. ನಾನೇ ಖುದ್ದು ಕೆಲವೊಂದು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದರು.

ಪೌಷ್ಠಿಕ ಆಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಒಂದು ಮಗುವಿಗೆ 8 ರೂಪಾಯಿಯಂತೆ ನಿಗದಿಪಡಿಸಿದೆ. ಕಳೆದ 9 ವರ್ಷಗಳಿಂದ ಈ ಮೊತ್ತವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿಲ್ಲ. ಈ ಮೊತ್ತದಲ್ಲೇ ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದೆ ಎಂದರು.

2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ಸೃಷ್ಠಿ ಎಂಬ ಯೋಜನೆ ಆರಂಭಿಸಿ, ಪೌಷ್ಠಿಕ ಆಹಾರ ನೀಡುವ ಸಲುವಾಗಿ ಮಕ್ಕಳಿಗೆ ಮೊಟ್ಟೆ ನೀಡಲು ತೀರ್ಮಾನಿಸಿತು. ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ ಕೆಲವೊಂದು ಕೇಂದ್ರಗಳಲ್ಲಿ ಸಮಸ್ಯೆಗಳು ಬಂದಿದ್ದು, ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

16 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago