Mysore
23
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಅಂಗನವಾಡಿ ಶಿಕ್ಷಕಿಯರನ್ನು ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇಂದಿನಿಂದ ರಾಜ್ಯದ ೨೫೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್‌ , ಪುಸ್ತಕ,ಸಮವಸ್ತ್ರ ವಿತರಣೆ ಮಾಡಲಾಗುವುದು. ಈಗಾಗಲೇ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಮತ್ತು ಶಿಕ್ಷಕರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ೩೦ ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.

Tags:
error: Content is protected !!