Mysore
19
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಅಂಗನವಾಡಿ ಕಾರ್ಯಕರ್ತೆಯರ ಜೀವ ವಿಮೆ ೨ಲಕ್ಷಕ್ಕೆ ಏರಿಕೆ :ಸ್ಮೃತಿ ಇರಾನಿ

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು ಲಕ್ಷ ರೂಪಾಯಿಗಳವರೆಗಿನ ಆಕಸ್ಮಿಕ ರಕ್ಷಣೆಯ ಪ್ರಯೋಜನಗಳನ್ನು ವಿಸ್ತರಿಸಲಾಗಿದೆ ಮತ್ತು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ತಿಳಿಸಲಾಗಿದೆ.

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಈ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರತಿ ಸಮುದಾಯ ಆಧಾರಿತ ಕಾರ್ಯಕ್ರಮಕ್ಕೆ 250 ರೂಪಾಯಿಗಳನ್ನು ಕಾರ್ಮಿಕರಿಗೆ ನೀಡಲಾಗುತ್ತದೆ. ಮತ್ತು ಕಾರ್ಮಿಕರು ಫಲಾನುಭವಿಯ ಮನೆಗೆ ಭೇಟಿ ನೀಡಿದರೆ ಅಥವಾ WHO ಮಾನದಂಡಗಳ ಪ್ರಕಾರ ಮಗುವನ್ನು ಅಳತೆ ಮಾಡಿದರೆ 500 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್‌ನ ಪ್ರಯೋಜನಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗಿದೆ ಎಂದು ನಿನ್ನೆ ಮಧ್ಯಂತರ ಬಜೆಟ್‌ ನಲ್ಲಿ ಸಚಿವರು ಘೋಷಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!