ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು ಲಕ್ಷ ರೂಪಾಯಿಗಳವರೆಗಿನ ಆಕಸ್ಮಿಕ ರಕ್ಷಣೆಯ ಪ್ರಯೋಜನಗಳನ್ನು ವಿಸ್ತರಿಸಲಾಗಿದೆ ಮತ್ತು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ತಿಳಿಸಲಾಗಿದೆ.
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಈ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರತಿ ಸಮುದಾಯ ಆಧಾರಿತ ಕಾರ್ಯಕ್ರಮಕ್ಕೆ 250 ರೂಪಾಯಿಗಳನ್ನು ಕಾರ್ಮಿಕರಿಗೆ ನೀಡಲಾಗುತ್ತದೆ. ಮತ್ತು ಕಾರ್ಮಿಕರು ಫಲಾನುಭವಿಯ ಮನೆಗೆ ಭೇಟಿ ನೀಡಿದರೆ ಅಥವಾ WHO ಮಾನದಂಡಗಳ ಪ್ರಕಾರ ಮಗುವನ್ನು ಅಳತೆ ಮಾಡಿದರೆ 500 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಆಯುಷ್ಮಾನ್ ಭಾರತ್ನ ಪ್ರಯೋಜನಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗಿದೆ ಎಂದು ನಿನ್ನೆ ಮಧ್ಯಂತರ ಬಜೆಟ್ ನಲ್ಲಿ ಸಚಿವರು ಘೋಷಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…