ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಚಿಂತನೆ ನಡೆಸಿರುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಅಂಗವಾಡಿ ಕಾರ್ಯಕರ್ತೆಯರ ಧರಣಿ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬುಲಾವ್ ನೀಡಿ ವಿಧಾನಸೌಧದಲ್ಲಿ ಕಾರ್ಯಕರ್ತೆಯರ ಬೇಡಿಕೆ ವಿಚಾರವಾಗಿ ಸಾಕಷ್ಟು ಚರ್ಚೆ ನಡೆಸಿದರು.
ಸಿಎಂ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಸ್ತುತ 2600 ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಮಾಡುವುದಕ್ಕೆ ಸುತ್ತೋಲೆ ತಂದಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದರು
ಅಲ್ಲದೆ ಎಲ್ಕೆಜಿ, ಯುಕೆಜಿಯನ್ನು ಸರ್ಕಾರಿ ಶಾಲೆಗಳಲ್ಲಿ ಮಾಡಲು ಚಿಂತನೆ ಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳಲ್ಲೇ ಮಾಡಬೇಕೆಂಬ ಕಳಕಳಿ ಶಿಕ್ಷಣ ಇಲಾಖೆಗೂ ಇದೆ. ಆದರೆ ಅಂಗನವಾಡಿಯವರು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. 40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆ ಆಗಿದೆ. ಅಂಗನವಾಡಿಗಳನ್ನ ಮೇಲ್ದೆರ್ಜೇಗೇರಿಸುವ ಕೆಲಸದ ಬಗ್ಗೆ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…