ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಚಿಂತನೆ ನಡೆಸಿರುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಅಂಗವಾಡಿ ಕಾರ್ಯಕರ್ತೆಯರ ಧರಣಿ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬುಲಾವ್ ನೀಡಿ ವಿಧಾನಸೌಧದಲ್ಲಿ ಕಾರ್ಯಕರ್ತೆಯರ ಬೇಡಿಕೆ ವಿಚಾರವಾಗಿ ಸಾಕಷ್ಟು ಚರ್ಚೆ ನಡೆಸಿದರು.
ಸಿಎಂ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಸ್ತುತ 2600 ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಮಾಡುವುದಕ್ಕೆ ಸುತ್ತೋಲೆ ತಂದಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದರು
ಅಲ್ಲದೆ ಎಲ್ಕೆಜಿ, ಯುಕೆಜಿಯನ್ನು ಸರ್ಕಾರಿ ಶಾಲೆಗಳಲ್ಲಿ ಮಾಡಲು ಚಿಂತನೆ ಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳಲ್ಲೇ ಮಾಡಬೇಕೆಂಬ ಕಳಕಳಿ ಶಿಕ್ಷಣ ಇಲಾಖೆಗೂ ಇದೆ. ಆದರೆ ಅಂಗನವಾಡಿಯವರು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. 40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆ ಆಗಿದೆ. ಅಂಗನವಾಡಿಗಳನ್ನ ಮೇಲ್ದೆರ್ಜೇಗೇರಿಸುವ ಕೆಲಸದ ಬಗ್ಗೆ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…