ರಾಜ್ಯ

ಅರಣ್ಯ ಸಂರಕ್ಷಣೆ ಹಾಗೂ ಸಂವರ್ಧನೆಗೆ ಅನಿಲ್‌ ಕುಂಬ್ಳೆ ಬಲ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ. ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.

ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕ ಅಷ್ಟೇ ಅಲ್ಲ, ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ.

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ. ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಇಲಾಖೆಯ ಜೊತೆಗೂಡಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago