anil kumble
ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ. ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.
ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕ ಅಷ್ಟೇ ಅಲ್ಲ, ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ.
ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ. ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.
ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಇಲಾಖೆಯ ಜೊತೆಗೂಡಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…