anil kumble
ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ. ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.
ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕ ಅಷ್ಟೇ ಅಲ್ಲ, ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ.
ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ. ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.
ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಇಲಾಖೆಯ ಜೊತೆಗೂಡಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…