Mysore
22
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ತೀವ್ರಗೊಂಡ ಅನ್ನದಾತರ ಪ್ರತಿಭಟನೆ: ನಾಳೆ ಬೆಳಗಾವಿ ಬಂದ್‌ಗೆ ಕರೆ

ಬೆಳಗಾವಿ: ಬೆಳಗಾವಿಯಲ್ಲಿ ಅನ್ನದಾತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್‌ಗೆ ಕರೆ ನೀಡಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ.

ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ, ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!