ರಾಜ್ಯ

ಬೆಂಗಳೂರು-ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಘೋಷಣೆ

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ ೩೦ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಮಾಹಿತಿ ನೀಡೋದು ಕಡ್ಡಾಯವಲ್ಲ ; ಆಯೋಗ ಸ್ಪಷ್ಟನೆ

ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು ೨೪ ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದು ೩೦ ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ.

ಕಳೆದ ವರ್ಷವೊಂದರಲ್ಲೇ ೨೬ ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ.

ಈ ವಿಷಯದ ಕುರಿತಾಗಿ ಕಳೆದ ನಾಲ್ಕು ವರ್ಷಗಳಿಂದ ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳಲ್ಲಿ ಮತ್ತು ಹಿರಿಯ ರೈಲ್ವೆ ಅಽಕಾರಿಗಳೊಂದಿಗೆ ನಿರಂತರ ಪ್ರಯತ್ನದ ಫಲವಾಗಿದೆ. ಈ ಹೊಸ ರೈಲು ಪ್ರಯಾಣದ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಮತ್ತು ವಿಮಾನ ಹಾಗೂ ಬಸ್‌ಗಳಿಗೆ ಆರಾಮದಾಯಕವಾದ ಪರ್ಯಾಯವನ್ನು ಒದಗಿಸುತ್ತದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago