ರಾಜ್ಯ

ಹಿಂದುಳಿದ ವರ್ಗಗಳ ಸಂಪಾದಕ ಮತ್ತು ವರದಿಗಾರರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು :  ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ.

ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ, ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಣಿಯವರ ವಿರಚಿತ ಒಳಕೋರೆ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ.

ತುಳಿತಕ್ಕೊಳಗಾದ ಸಮುದಾಯಗಳ ಪರ ದ್ವನಿಯಾಗಿದ್ದ ಹಿರಿಯ ಸಾಹಿತಿ ಕೆ.ಶರೀಪಾ, ಲಂಕೇಶ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ಹಿರಿಯ ಪತ್ರಕರ್ತ ಐ.ಎಚ್.ಸಂಗಮ್ ದೇವ್, ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿರುವ ನಳಿನಾಕ್ಷಿ ಸಣ್ಣಪ್ಪ, ಸಮಾಜ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ ಎಂ.ನಾಗವೇಣಿ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಕನ್ನಡ ಭಾಷಾ ಉಳಿವಿಗಾಗಿ ಕನ್ನಡ ಭಾಷೆ ಪತ್ರಿಕೆ ಆರಂಭಿಸಿ ಶೋಷಿತರ ದ್ವನಿಯಾಗಿರುವ ಸಂಧ್ಯಾಕಾಲ ಪತ್ರಿಕೆಯ ಸಂಪಾದಕ ಶಿವಲಿಂಗಪ್ಪ ಅವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಗಂಧರ್ವ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ ಹೆಚ್.ಜಿ. ಕಾರ್ಯದರ್ಶಿ ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ತಿಂಗಳ 15ರಂದು ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

8 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

10 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

11 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

12 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

13 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

13 hours ago