ಬೆಂಗಳೂರು : ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ.
ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ, ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಣಿಯವರ ವಿರಚಿತ ಒಳಕೋರೆ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ.
ತುಳಿತಕ್ಕೊಳಗಾದ ಸಮುದಾಯಗಳ ಪರ ದ್ವನಿಯಾಗಿದ್ದ ಹಿರಿಯ ಸಾಹಿತಿ ಕೆ.ಶರೀಪಾ, ಲಂಕೇಶ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ಹಿರಿಯ ಪತ್ರಕರ್ತ ಐ.ಎಚ್.ಸಂಗಮ್ ದೇವ್, ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿರುವ ನಳಿನಾಕ್ಷಿ ಸಣ್ಣಪ್ಪ, ಸಮಾಜ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ ಎಂ.ನಾಗವೇಣಿ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಕನ್ನಡ ಭಾಷಾ ಉಳಿವಿಗಾಗಿ ಕನ್ನಡ ಭಾಷೆ ಪತ್ರಿಕೆ ಆರಂಭಿಸಿ ಶೋಷಿತರ ದ್ವನಿಯಾಗಿರುವ ಸಂಧ್ಯಾಕಾಲ ಪತ್ರಿಕೆಯ ಸಂಪಾದಕ ಶಿವಲಿಂಗಪ್ಪ ಅವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಗಂಧರ್ವ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ ಹೆಚ್.ಜಿ. ಕಾರ್ಯದರ್ಶಿ ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ತಿಂಗಳ 15ರಂದು ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…