ಬೆಂಗಳೂರು : ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ.
ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ, ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಣಿಯವರ ವಿರಚಿತ ಒಳಕೋರೆ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ.
ತುಳಿತಕ್ಕೊಳಗಾದ ಸಮುದಾಯಗಳ ಪರ ದ್ವನಿಯಾಗಿದ್ದ ಹಿರಿಯ ಸಾಹಿತಿ ಕೆ.ಶರೀಪಾ, ಲಂಕೇಶ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ಹಿರಿಯ ಪತ್ರಕರ್ತ ಐ.ಎಚ್.ಸಂಗಮ್ ದೇವ್, ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿರುವ ನಳಿನಾಕ್ಷಿ ಸಣ್ಣಪ್ಪ, ಸಮಾಜ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ ಎಂ.ನಾಗವೇಣಿ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಕನ್ನಡ ಭಾಷಾ ಉಳಿವಿಗಾಗಿ ಕನ್ನಡ ಭಾಷೆ ಪತ್ರಿಕೆ ಆರಂಭಿಸಿ ಶೋಷಿತರ ದ್ವನಿಯಾಗಿರುವ ಸಂಧ್ಯಾಕಾಲ ಪತ್ರಿಕೆಯ ಸಂಪಾದಕ ಶಿವಲಿಂಗಪ್ಪ ಅವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಗಂಧರ್ವ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ ಹೆಚ್.ಜಿ. ಕಾರ್ಯದರ್ಶಿ ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ತಿಂಗಳ 15ರಂದು ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…