Another 208 services to be available soon at Bapuji Seva Kendras: Priyank Kharge
ಬೆಂಗಳೂರು : ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2024-25 ನೇ ಸಾಲಿನ ಆಯವ್ಯಯದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು, ಅದರಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಗ್ರಾಮೀಣ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯವನ್ನು ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ 46 ವಿವಿಧ ಇಲಾಖೆಗಳ 800ಕ್ಕಿಂತಲೂ ಹೆಚ್ಚು ಸೇವೆಗಳಲ್ಲಿ ಗ್ರಾಮೀಣ ಜನತೆಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒದಗಿಸಲಿರುವುದರಿಂದ ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ನೀಡಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಆಧೀನದಲ್ಲಿ ಬರುವ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ 800 ಕ್ಕಿಂತ ಹೆಚ್ಚು ಸೇವೆಗಳನ್ನುಈಗ ಒದಗಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ವಿವಿಧ ಇಲಾಖೆಗಳ ಸುಮಾರು 300 ಸೇವೆಗಳನ್ನು ಒದಗಿಸಿದಂತಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…