ರಾಜ್ಯ

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ.

ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇದೇ ನವೆಂಬರ್‌.13ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದಯ ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವಿನಿಂದ ಮೃಗಾಲಯದಲ್ಲಿ ಆತಂಕ ಮನೆಮಾಡಿದ್ದು, ಇತರ ಪ್ರಾಣಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.

ಮೃಗಾಲಯಕ್ಕೆ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಕೃಷ್ಣಮೃಗಗಳ ಸಾವಿಗೆ ಖಚಿತ ಮಾಹಿತಿ ಲಭ್ಯವಾಗಲಿದೆ.

ಈ ಬೆನ್ನಲ್ಲೇ ಮೃಗಾಲಯದಲ್ಲಿರುವ ಉಳಿದ 9 ಕೃಷ್ಣಮೃಗಗಳಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

13 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

13 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

14 hours ago