ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ.
ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಇದೇ ನವೆಂಬರ್.13ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದಯ ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವಿನಿಂದ ಮೃಗಾಲಯದಲ್ಲಿ ಆತಂಕ ಮನೆಮಾಡಿದ್ದು, ಇತರ ಪ್ರಾಣಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.
ಮೃಗಾಲಯಕ್ಕೆ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಕೃಷ್ಣಮೃಗಗಳ ಸಾವಿಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
ಈ ಬೆನ್ನಲ್ಲೇ ಮೃಗಾಲಯದಲ್ಲಿರುವ ಉಳಿದ 9 ಕೃಷ್ಣಮೃಗಗಳಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…