ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಮನೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಜೆಡಿಎಸ್ನ ಹೆಚ್ಡಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನೇ ಆಧರಿಸಿ ಎಸ್ಐಟಿ ತನಿಖೆ ಆರಂಭಿಸಿದೆ.
ಸದ್ಯ ಇದೀಗ ಪ್ರಜ್ವಲ್ ರೇವಣ್ಣ ವಿರುದ್ದ ಎರಡನೇ ದೂರು ದಾಖಲಾಗಿದ್ದು, ಈ ದೂರಿನ ತನಿಖೆಯನ್ನೂ ಸಹ ಎಸ್ಐಟಿ ಕೈಗೆತ್ತಿಕೊಂಡಿದೆ. ಈ ದೂರಿನ ಕುರಿತಾಗಿ ಮಾಧ್ಯಮದವರ ಜತೆ ಮಾತನಾಡಿದ ಪರಮೇಶ್ವರ್ ʼಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಿದೆʼ ಎಂದು ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…