ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಮನೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಜೆಡಿಎಸ್ನ ಹೆಚ್ಡಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನೇ ಆಧರಿಸಿ ಎಸ್ಐಟಿ ತನಿಖೆ ಆರಂಭಿಸಿದೆ.
ಸದ್ಯ ಇದೀಗ ಪ್ರಜ್ವಲ್ ರೇವಣ್ಣ ವಿರುದ್ದ ಎರಡನೇ ದೂರು ದಾಖಲಾಗಿದ್ದು, ಈ ದೂರಿನ ತನಿಖೆಯನ್ನೂ ಸಹ ಎಸ್ಐಟಿ ಕೈಗೆತ್ತಿಕೊಂಡಿದೆ. ಈ ದೂರಿನ ಕುರಿತಾಗಿ ಮಾಧ್ಯಮದವರ ಜತೆ ಮಾತನಾಡಿದ ಪರಮೇಶ್ವರ್ ʼಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಿದೆʼ ಎಂದು ಹೇಳಿಕೆ ನೀಡಿದ್ದಾರೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…