ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ ಕಾಲ ಪ್ರತಿದಿನ 9 ಸಾವಿರ ಕ್ಯೂಸೆಕ್ಸ್ ನೀರಿನ ಹರಿವು ಖಚಿತಪಡಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ಸೋಮವಾರ ಸೂಚಿಸಿದೆ.
ಆಗಸ್ಟ್ 25ರ ಬೆಳಗ್ಗೆ 8 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದೆ. ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಸತತ ಮೂರನೇ ಬಾರಿ ನೀರು ಹರಿಸುವ ಸೂಚನೆ ಬಂದಂತಾಗಿದೆ. ಮೊದಲಿಗೆ 3 ಸಾವಿರ ಕ್ಯೂಸೆಕ್ಸ್, ಬಳಿಕ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚಿಸಲಾಗಿತ್ತು. ಇದೀಗ 12 ಸಾವಿರ ಕ್ಯೂಸೆಕ್ಸ್ ಆದೇಶವನ್ನು ಕಡಿಮೆ ಮಾಡಿ 9 ಸಾವಿರ ಕ್ಯೂಸೆಕ್ಸ್ಗೆ ನಿಗದಿಪಡಿಸಲಾಗಿದೆ.
15 ದಿನಕ್ಕೆ 11.66 ಟಿಎಂಸಿ ನೀರು ಸಿಡಬ್ಲ್ಯುಆರ್ಸಿ ನಿರ್ಧಾರದಂತೆ ಆಗಸ್ಟ್ 25ರಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು ಸುಮಾರು 11.66 ಟಿಎಂಸಿ ನೀರು ಹರಿಯುವಂತೆ ಕರ್ನಾಟಕ ಖಚಿತಪಡಿಸಬೇಕಿದೆ.
ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳ ಮೇಲ್ಭಾಗದಲ್ಲಿರುವ ಕೇಂದ್ರಗಳ ಅಂಕಿ-ಅಂಶಗಳು ಹಾಗೂ ಮುಂದಿನ ಏಳು ದಿನಗಳ ಒಳಹರಿವಿನ ಮುನ್ಸೂಚನೆಗಳನ್ನು ಸಿಡಬ್ಲ್ಯುಆರ್ಸಿ ಪರಿಗಣಿಸಿದೆ.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…