g parameshwara opinion about janivara
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ.
ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದಾಗ, ನಾನು ಮುಖ್ಯಮಂತ್ರಿ ರೇಸ್ನಲ್ಲಿದ್ದೇನೆ ಎಂದು ಸ್ವಾಭಾವಿಕವಾಗಿಯೇ ಉತ್ತರಿಸುತ್ತೇನೆ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಮುಖ್ಯಮಂತ್ರಿಯಾದರೆ, ನಾವು ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನು ಓದಿ: ಅಧಿಕಾರ ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ
ಇದು ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ ಸಿದ್ದರಾಮಯ್ಯ ಬಣದಿಂದ ಬಂದ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ ಎಂದು ಅವರು ಪುನರುಚ್ಚರಿಸಿದರು. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ “ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ” ಎಂದು ಪರಮೇಶ್ವರ್ ಹೇಳಿದರು. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಯಾವುದೇ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…