ರಾಜ್ಯ

ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆ: ಏನದು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದಾಗ, ನಾನು ಮುಖ್ಯಮಂತ್ರಿ ರೇಸ್‍ನಲ್ಲಿದ್ದೇನೆ ಎಂದು ಸ್ವಾಭಾವಿಕವಾಗಿಯೇ ಉತ್ತರಿಸುತ್ತೇನೆ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಮುಖ್ಯಮಂತ್ರಿಯಾದರೆ, ನಾವು ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು.

ಇದನ್ನು ಓದಿ: ಅಧಿಕಾರ ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

ಇದು ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ ಸಿದ್ದರಾಮಯ್ಯ ಬಣದಿಂದ ಬಂದ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ ಎಂದು ಅವರು ಪುನರುಚ್ಚರಿಸಿದರು. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್‌ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ “ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ” ಎಂದು ಪರಮೇಶ್ವರ್ ಹೇಳಿದರು. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಯಾವುದೇ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago