ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ಹಬ್ಬಲು ಪ್ರಾರಂಭವಾಗಿದೆ.
ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದೆ.
ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಮುಂಜಾಗ್ರತೆ ಕ್ರಮವಾಗಿ ಈ ಭಾಗದಲ್ಲಿ ಬೆಂಕಿ ರೇಖೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…