ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.10ರಂದು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ.
ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದು, ಜೊತೆಗೆ ಮೆಟ್ರೋ ಫೇಸ್ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಆರ್ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ.
ಪ್ರತಿ ದಿನ ಸುಮಾರು 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ. ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸುವ ಸಾಧ್ಯತೆ ಇದೆ.
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…