ಚಿಕ್ಕಮಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 8 ಸಾಕು ನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿ ಕೊಂದು ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.ಪುರದ ಅಬ್ಬಿಗುಂಡಿ ಬಳಿ ನಡೆದಿದೆ.
ಸತ್ಯನಾರಾಯಣ ಎಂಬುವವರ ಮನೆಯಲ್ಲಿ ಸಾಕಿದ್ದ 8 ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಸತ್ತ ಕೋಳಿಗಳಿಗೆ ಕ್ರಿಮಿನಾಶಕ ಹಾಕಿ ಇಡಲಾಗಿತ್ತು. ಅದನ್ನು ತಿಂದು 8 ನಾಯಿಗಳು ಮೃತಪಟ್ಟಿವೆ.
ಘಟನೆಗೆ ಗ್ರಾಮಸ್ಥರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಸಾಕು ನಾಯಿ ಸಾವಿಗೆ ಮಾಲೀಕರು ಕಂಬನಿ ಮಿಡಿದಿದ್ದು, ಮನೆ ಮಾಲೀಕರ ಮೇಲಿನ ದ್ವೇಷಕ್ಕೆ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.





