ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ಯಾವುದೇ ನಿಯಂತ್ರಣವೂ ಇಲ್ಲ. ಕರ್ನಾಟಕಕ್ಕಂತೂ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ ನಲ್ಲಿ ಆಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಹೈದ್ರಾಬಾದ್ – ಬೆಂಗಳೂರು ಹೈಸ್ಪೀಡ್ ರೈಲು ಸಮಾಧಾನಕರ ಬಹುಮಾನದಂತಿದೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೂ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನೀಡುವಲ್ಲಿ ಈ ಬಾರಿಯೂ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆ ಹೆಚ್ಚಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುತ್ತಾರೆ ಎಂದೂ ಅರಣ್ಯ ಸಚಿವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ನೂತನ ಶ್ರೀಗಂಧದ ನೀತಿ ರಚಿಸಿದೆ. ಕಡಲ ಆಮೆಗಳ ಸಂರಕ್ಷಣೆಯನ್ನು ಪ್ರವಾಸೋದ್ಯಮದಲ್ಲಿ ಸೇರಿಸಲಾಗಿದೆ. ಕರ್ನಾಟಕದ ಮಂಗಳೂರು ಮತ್ತು ಕಾರವಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಡಲಾಮೆಗಳ ಮೊಟ್ಟೆಗಳ ಸಂರಕ್ಷಣೆ ಮತ್ತು ಮರಿಗಳ ರಕ್ಷಣೆಗೆ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಯೋಜನೆಗೆ ಮಾದರಿಯಾಗಿದೆ ಎಂದೂ ತಿಳಿಸಿದ್ದಾರೆ.
ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಬಜೆಟ್ ನಲ್ಲಿಯೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ ಸೃಷ್ಟಿಸುವಂತಹ ಯಾವುದೇ ಯೋಜನೆ ಕಾಣುತ್ತಿಲ್ಲ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ ಎಂದು ಈಶ್ವರ ಖಂಡ್ರೆ 2026ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…