ರಾಜ್ಯ

ಕೆಎಂಎಫ್‌ನಿಂದ ಮತ್ತೊಂದು ಮೈಲಿಗಲ್ಲು:‌ ಏನದು ಗೊತ್ತಾ?

ಬೆಂಗಳೂರು: ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಶೇ.38ರಷ್ಟು ವಹಿವಾಟಿನಲ್ಲಿ ಪ್ರಗತಿಯಾಗಿದ್ದು, ಇದು ಕೆಎಂಎಫ್ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಹೇಳಿದರು.

2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ 33.48 ಕೋಟಿ ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ ಹಬ್ಬದ ಅವಧಿಯ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ ಎರಡು ತಿಂಗಳು ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ ಒಂದು ಸಾವಿರ ಮೆಟ್ರಿಕ್ ಟನ್ ಮಾರಾಟ ಗುರಿ ನಿಗದಿಪಡಿಸಲಾಗಿತ್ತು. ಆದರೆ, ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಇದನ್ನು ಓದಿ: ಜಿಎಸ್‌ಟಿ ವಿನಾಯಿತಿ: ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ

ನಂದಿನಿ ಬ್ರಾಂಡ್‍ನ ಗುಣಮಟ್ಟ, ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದರು. ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಶುದ್ಧತೆ, ಗುಣಮಟ್ಟ ಹಾಗೂ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿ ನಂದಿನಿ ಬ್ರಾಂಡ್‍ಅನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ. ಪ್ರತಿ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ನಂದಿನಿ ಸಿಹಿ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ. 40ಕ್ಕೂ ಹೆಚ್ಚು ಸಿಹಿ ಉತ್ಪನ್ನಗಳ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿತ್ತು ಎಂದರು.

ತುಪ್ಪ, ಬೆಣ್ಣೆ, ಪನ್ನೀರು, ಸಿಹಿ ತಿನಿಸು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 185ಕ್ಕೂ ಹೆಚ್ಚು ಬಗೆಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕರ್ನಾಟಕ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ, ದೆಹಲಿ ಅಸ್ಸೋಂ, ದುಬೈ ಮತ್ತು ಸಿಂಗಾಪುರಗಳಿಗೂ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಮಾರುಕಟ್ಟೆಯನ್ನು ವಿಸ್ತರಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ದೆಹಲಿಯಲ್ಲಿ ಒಂದು ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ ಎಂದ ಅವರು, ಮಧುಮೇಹಿಗಳು ಬಳಸುವಂತಹ ಮೂರು ಉತ್ಪನ್ನಗಳನ್ನು ಇತ್ತೀಚೆಗೆ ಕೆಎಂಎಫ್ ಬಿಡುಗಡೆ ಮಾಡಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago