ರಾಜ್ಯ

ಕೆಎಂಎಫ್‌ನಿಂದ ಮತ್ತೊಂದು ಮೈಲಿಗಲ್ಲು:‌ ಏನದು ಗೊತ್ತಾ?

ಬೆಂಗಳೂರು: ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಶೇ.38ರಷ್ಟು ವಹಿವಾಟಿನಲ್ಲಿ ಪ್ರಗತಿಯಾಗಿದ್ದು, ಇದು ಕೆಎಂಎಫ್ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಹೇಳಿದರು.

2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ 33.48 ಕೋಟಿ ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ ಹಬ್ಬದ ಅವಧಿಯ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ ಎರಡು ತಿಂಗಳು ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ ಒಂದು ಸಾವಿರ ಮೆಟ್ರಿಕ್ ಟನ್ ಮಾರಾಟ ಗುರಿ ನಿಗದಿಪಡಿಸಲಾಗಿತ್ತು. ಆದರೆ, ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಇದನ್ನು ಓದಿ: ಜಿಎಸ್‌ಟಿ ವಿನಾಯಿತಿ: ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ

ನಂದಿನಿ ಬ್ರಾಂಡ್‍ನ ಗುಣಮಟ್ಟ, ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದರು. ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಶುದ್ಧತೆ, ಗುಣಮಟ್ಟ ಹಾಗೂ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿ ನಂದಿನಿ ಬ್ರಾಂಡ್‍ಅನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ. ಪ್ರತಿ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ನಂದಿನಿ ಸಿಹಿ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ. 40ಕ್ಕೂ ಹೆಚ್ಚು ಸಿಹಿ ಉತ್ಪನ್ನಗಳ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿತ್ತು ಎಂದರು.

ತುಪ್ಪ, ಬೆಣ್ಣೆ, ಪನ್ನೀರು, ಸಿಹಿ ತಿನಿಸು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 185ಕ್ಕೂ ಹೆಚ್ಚು ಬಗೆಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕರ್ನಾಟಕ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ, ದೆಹಲಿ ಅಸ್ಸೋಂ, ದುಬೈ ಮತ್ತು ಸಿಂಗಾಪುರಗಳಿಗೂ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಮಾರುಕಟ್ಟೆಯನ್ನು ವಿಸ್ತರಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ದೆಹಲಿಯಲ್ಲಿ ಒಂದು ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ ಎಂದ ಅವರು, ಮಧುಮೇಹಿಗಳು ಬಳಸುವಂತಹ ಮೂರು ಉತ್ಪನ್ನಗಳನ್ನು ಇತ್ತೀಚೆಗೆ ಕೆಎಂಎಫ್ ಬಿಡುಗಡೆ ಮಾಡಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

34 mins ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

3 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

7 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

23 hours ago