ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಮತ್ತೊಬ್ಬ ಶಾಸಕ: ರಾಜೀನಾಮೆ ನೀಡುವ ಬೆದರಿಕೆ

ಬೆಂಗಳೂರು: ಶಾಸಕ ಬಿ.ಆರ್.ಪಾಟೀಲ್‌ ಬಳಿಕ ಈಗ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, 2-3 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ರಾಜುಕಾಗೆ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

2 ವರ್ಷಗಳ ಹಿಂದೆ ತಮಮ್ ಕ್ಷೇತ್ರಕ್ಕೆ ವಿಶೇಷ ಅನುದಾನದಡಿ 25 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. ಅದರಲ್ಲಿ 12 ಕೋಟಿ ರೂ. ರಸ್ತೆಯ ಅಭಿವೃದ್ಧಿಗೆ ನಿಗದಿಯಾಗಿದ್ದರೆ ಉಳಿದ 13 ಕೋಟಿ ರೂಗಳನ್ನು 72 ಸಮುದಾಯ ಭವನಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೂ ಕಾರ್ಯಾದೇಶ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.

ಯಾವ ಕಾರಣಕ್ಕೆ ಕಾರ್ಯಾದೇಶ ನೀಡಲಾಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಕ್ಕಿಂತಲೂ ಭೀಕರ ಪರಿಸ್ಥಿತಿ ತಮ್ಮ ಕ್ಷೇತ್ರದಲ್ಲಿದೆ. ಅಧಿಕಾರಿಗಳು 2 ವರ್ಷವಾದರೂ ಕಾರ್ಯಾದೇಶ ಕೊಡದೇ ಇರುವುದಕ್ಕೆ ಕಾರಣಗಳೇನು ಎಂದು ತಮಗೆ ಗೊತ್ತಿಲ್ಲ ಎಂದಿದ್ದಾರೆ.

ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ರಾಜೀನಾಮೆ ನೀಡುವ ಮನಸ್ಥಿತಿಯಲ್ಲಿದ್ದೇನೆ. 2-3 ದಿನಗಳಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

16 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago