ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಮತ್ತೊಬ್ಬ ಶಾಸಕ: ರಾಜೀನಾಮೆ ನೀಡುವ ಬೆದರಿಕೆ

ಬೆಂಗಳೂರು: ಶಾಸಕ ಬಿ.ಆರ್.ಪಾಟೀಲ್‌ ಬಳಿಕ ಈಗ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, 2-3 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ರಾಜುಕಾಗೆ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

2 ವರ್ಷಗಳ ಹಿಂದೆ ತಮಮ್ ಕ್ಷೇತ್ರಕ್ಕೆ ವಿಶೇಷ ಅನುದಾನದಡಿ 25 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. ಅದರಲ್ಲಿ 12 ಕೋಟಿ ರೂ. ರಸ್ತೆಯ ಅಭಿವೃದ್ಧಿಗೆ ನಿಗದಿಯಾಗಿದ್ದರೆ ಉಳಿದ 13 ಕೋಟಿ ರೂಗಳನ್ನು 72 ಸಮುದಾಯ ಭವನಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೂ ಕಾರ್ಯಾದೇಶ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.

ಯಾವ ಕಾರಣಕ್ಕೆ ಕಾರ್ಯಾದೇಶ ನೀಡಲಾಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಕ್ಕಿಂತಲೂ ಭೀಕರ ಪರಿಸ್ಥಿತಿ ತಮ್ಮ ಕ್ಷೇತ್ರದಲ್ಲಿದೆ. ಅಧಿಕಾರಿಗಳು 2 ವರ್ಷವಾದರೂ ಕಾರ್ಯಾದೇಶ ಕೊಡದೇ ಇರುವುದಕ್ಕೆ ಕಾರಣಗಳೇನು ಎಂದು ತಮಗೆ ಗೊತ್ತಿಲ್ಲ ಎಂದಿದ್ದಾರೆ.

ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ರಾಜೀನಾಮೆ ನೀಡುವ ಮನಸ್ಥಿತಿಯಲ್ಲಿದ್ದೇನೆ. 2-3 ದಿನಗಳಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago