ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಮತ್ತೊಂದು ರಿಲೀಫ್:‌ ಕೋರ್ಟ್‌ ಹಾಜರಿಗೆ ವಿನಾಯಿತಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕೋರ್ಟ್‌ ವಿನಾಯಿತಿ ನೀಡಿದೆ.

ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದು ಹಾಗೂ ಜಾಮೀನು ಕೋರಿ ಮಾಜಿ ಸಿಎಂ ಬಿಎಸ್‌ವೈ ಅವರು ಸಲ್ಲಿಸಿದ್ದ ಅರ್ಜಿಗಳು ಇಂದು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್‌ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದವು.

ಕೆಲಕಾಲ ವಿಚಾರಣೆ ಆಲಿಸಿದ ನ್ಯಾಯಾಲಯ ಪ್ರಕರಣ ಮುಂದೂಡುವಂತೆ ಮಾಡಿದ ಮನವಿಯನ್ನು ಮಾನ್ಯ ಮಾಡಲಾಗಿದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿದಾರರ ಖುದ್ದು ಹಾಜರಿಗೆ ಜುಲೈ.28ರವರೆಗೆ ವಿನಾಯಿತಿ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜುಲೈ.26ಕ್ಕೆ ಮುಂದೂಡಿದ್ದಾರೆ.

ಎಸ್‌ಪಿಸಿ ಬಿಎನ್‌ ಜಗದೀಶ್‌ ಅವರು ಪ್ರಕರಣದಲ್ಲಿ ಅಡ್ವೋಕೇಟ್‌ ಜನರಲ್‌ ವಾದ ಮಂಡಿಸಲಿದ್ದಾರೆ. ಹಾಗಾಗಿ ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಕೋರಿದರು.

ಆಗ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿವಿ ನಾಗೇಶ್‌ ಅವರು, ಪ್ರಕರಣ ಸಂಬಂಧ ಸಿಐಡಿ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಅದನ್ನು ದಾಖಲಿಸಿಕೊಡ ನ್ಯಾಯಾಲಯ, ಅರ್ಜಿದಾರರೂ ಸೇರಿ ಎಲ್ಲಾ ಆರೋಪಿಗಳಿಗೆ ಜುಲೈ.15ರಂದು ಖುದ್ದು ಹಾಜರಾಗುವತೆ ಸಮನ್ಸ್‌ ಜಾರಿಗೊಳಿಸಿದೆ. ಹಾಗಾಗಿ ಸಮಯ ನೀಡಬಾರದು ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಅದಕ್ಕೆ ನ್ಯಾಯಪೀಠ ಈಗಾಗಲೇ ನಿಮಗೆ ಬಂಧಿಸದಂತೆ ರಕ್ಷಣೆ ನೀಡಲಾಗಿದೆ. ಹಾಗಾಗಿ ಒಂದೆರಡು ವಾರ ವಿಚಾರಣೆ ಮುಂದೂಡಿ ಪ್ರಾಸಿಕ್ಯೂಷನ್‌ಗೆ ಸಮಯ ನೀಡೋಣ ಎಂದು ಹೇಳಿದೆ.

ಬಿಎಸ್‌ವೈ ಪರ ವಕೀಲರು, ಇಲ್ಲ ಸೋಮವಾರವೇ ಅರ್ಜಿದಾರರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಹಾಗಾಗಿ ವಿಚಾರಣೆ ಮುಂದುವರಿಸಬೇಕು ಎಂದು ಕೋರಿದರು.

ಆಗ ನ್ಯಾಯಪೀಠ, ಹಾಗಿದ್ದರೆ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಮತ್ತಿತರರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸೂಚಿಸಲಾಗುವುದು. ವಿಚಾರಣೆ ಮುಂದೂಡಲಾಗುವುದು ಎಂದು ಹೇಳಿ ಅದರಂತೆ ಆದೇಶ ಹೊರಡಿಸಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

3 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

4 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

4 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

4 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

5 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

5 hours ago