ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಮತ್ತೊಂದು ರಿಲೀಫ್:‌ ಕೋರ್ಟ್‌ ಹಾಜರಿಗೆ ವಿನಾಯಿತಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕೋರ್ಟ್‌ ವಿನಾಯಿತಿ ನೀಡಿದೆ.

ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದು ಹಾಗೂ ಜಾಮೀನು ಕೋರಿ ಮಾಜಿ ಸಿಎಂ ಬಿಎಸ್‌ವೈ ಅವರು ಸಲ್ಲಿಸಿದ್ದ ಅರ್ಜಿಗಳು ಇಂದು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್‌ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದವು.

ಕೆಲಕಾಲ ವಿಚಾರಣೆ ಆಲಿಸಿದ ನ್ಯಾಯಾಲಯ ಪ್ರಕರಣ ಮುಂದೂಡುವಂತೆ ಮಾಡಿದ ಮನವಿಯನ್ನು ಮಾನ್ಯ ಮಾಡಲಾಗಿದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿದಾರರ ಖುದ್ದು ಹಾಜರಿಗೆ ಜುಲೈ.28ರವರೆಗೆ ವಿನಾಯಿತಿ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜುಲೈ.26ಕ್ಕೆ ಮುಂದೂಡಿದ್ದಾರೆ.

ಎಸ್‌ಪಿಸಿ ಬಿಎನ್‌ ಜಗದೀಶ್‌ ಅವರು ಪ್ರಕರಣದಲ್ಲಿ ಅಡ್ವೋಕೇಟ್‌ ಜನರಲ್‌ ವಾದ ಮಂಡಿಸಲಿದ್ದಾರೆ. ಹಾಗಾಗಿ ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಕೋರಿದರು.

ಆಗ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿವಿ ನಾಗೇಶ್‌ ಅವರು, ಪ್ರಕರಣ ಸಂಬಂಧ ಸಿಐಡಿ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಅದನ್ನು ದಾಖಲಿಸಿಕೊಡ ನ್ಯಾಯಾಲಯ, ಅರ್ಜಿದಾರರೂ ಸೇರಿ ಎಲ್ಲಾ ಆರೋಪಿಗಳಿಗೆ ಜುಲೈ.15ರಂದು ಖುದ್ದು ಹಾಜರಾಗುವತೆ ಸಮನ್ಸ್‌ ಜಾರಿಗೊಳಿಸಿದೆ. ಹಾಗಾಗಿ ಸಮಯ ನೀಡಬಾರದು ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಅದಕ್ಕೆ ನ್ಯಾಯಪೀಠ ಈಗಾಗಲೇ ನಿಮಗೆ ಬಂಧಿಸದಂತೆ ರಕ್ಷಣೆ ನೀಡಲಾಗಿದೆ. ಹಾಗಾಗಿ ಒಂದೆರಡು ವಾರ ವಿಚಾರಣೆ ಮುಂದೂಡಿ ಪ್ರಾಸಿಕ್ಯೂಷನ್‌ಗೆ ಸಮಯ ನೀಡೋಣ ಎಂದು ಹೇಳಿದೆ.

ಬಿಎಸ್‌ವೈ ಪರ ವಕೀಲರು, ಇಲ್ಲ ಸೋಮವಾರವೇ ಅರ್ಜಿದಾರರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಹಾಗಾಗಿ ವಿಚಾರಣೆ ಮುಂದುವರಿಸಬೇಕು ಎಂದು ಕೋರಿದರು.

ಆಗ ನ್ಯಾಯಪೀಠ, ಹಾಗಿದ್ದರೆ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಮತ್ತಿತರರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸೂಚಿಸಲಾಗುವುದು. ವಿಚಾರಣೆ ಮುಂದೂಡಲಾಗುವುದು ಎಂದು ಹೇಳಿ ಅದರಂತೆ ಆದೇಶ ಹೊರಡಿಸಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago