ನವದೆಹಲಿ : ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿಹಿಡಿರುವ ಪ್ರಾಧಿಕಾರ, ನವೆಂಬರ್ 23ರ ವರೆಗೆ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಇದರೊಂದಿಗೆ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸೂಚನೆ ನೀಡಿತ್ತು.
ಸಭೆಯ ಬಳಿಕ ಮಾಹಿತಿ ನೀಡಿದ ಎಸಿಎಸ್ ರಾಕೇಶ್ ಸಿಂಗ್, ನವೆಂಬರ್ 23 ರ ತನಕ 2600 ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಆದೇಶಿಸಿದೆ. ತಮಿಳುನಾಡು 13,000 ಕ್ಯೂಸೆಕ್ ನೀರು ಬಿಡಲು ಆಗ್ರಹಿಸಿತು ಎಂದರು.
ಇವತ್ತು ಮೇಕೆದಾಟು ವಿಚಾರವಾಗಿ ಸಕಾರಾತ್ಮಕ ಬೆಳವಣಿಗೆ ಆಗಿದೆ. ಮೇಕೆದಾಟು ಯೋಜನೆ ಚರ್ಚೆಗೆ ಪ್ರತ್ಯೇಕ ದಿನಾಂಕ ನಿಗದಿ ಮಾಡಲು ಪ್ರಾಧಿಕಾರ ಒಪ್ಪಿದೆ. ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪ್ರಾಧಿಕಾರ ಭರವಸೆ ನೀಡಿದೆ. ಅದೇ ರೀತಿ ತಮಿಳುನಾಡು ಅವರು ಇಂಟರ್ ಲಿಂಕಿಂಗ್ ಯೋಜನೆ ಬಗ್ಗೆ ಚರ್ಚೆ ಮಾಡಲು ಮುಂದಾಗಿದೆ. ಈ ಯೋಜನೆಗೆ ಕರ್ನಾಟಕದ ಆಕ್ಷೇಪ ಇದೆ. ಮುಂದಿನ ಸಭೆಯಲ್ಲಿ ಈ ಎರಡೂ ಯೋಜನೆಗಳು ಚರ್ಚೆಗೆ ಬರಬಹುದು ಎಂದು ರಾಕೇಶ್ ಸಿಂಗ್ ಹೇಳಿದರು.
ಈ ಮಧ್ಯೆ, ಮಂಡ್ಯದಲ್ಲಿ ರೈತರ ಹೋರಾಟ ಮುಂದುವರಿದಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಭರವಸೆ ನೀಡದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…