ನವದೆಹಲಿ : ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿಹಿಡಿರುವ ಪ್ರಾಧಿಕಾರ, ನವೆಂಬರ್ 23ರ ವರೆಗೆ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಇದರೊಂದಿಗೆ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸೂಚನೆ ನೀಡಿತ್ತು.
ಸಭೆಯ ಬಳಿಕ ಮಾಹಿತಿ ನೀಡಿದ ಎಸಿಎಸ್ ರಾಕೇಶ್ ಸಿಂಗ್, ನವೆಂಬರ್ 23 ರ ತನಕ 2600 ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಆದೇಶಿಸಿದೆ. ತಮಿಳುನಾಡು 13,000 ಕ್ಯೂಸೆಕ್ ನೀರು ಬಿಡಲು ಆಗ್ರಹಿಸಿತು ಎಂದರು.
ಇವತ್ತು ಮೇಕೆದಾಟು ವಿಚಾರವಾಗಿ ಸಕಾರಾತ್ಮಕ ಬೆಳವಣಿಗೆ ಆಗಿದೆ. ಮೇಕೆದಾಟು ಯೋಜನೆ ಚರ್ಚೆಗೆ ಪ್ರತ್ಯೇಕ ದಿನಾಂಕ ನಿಗದಿ ಮಾಡಲು ಪ್ರಾಧಿಕಾರ ಒಪ್ಪಿದೆ. ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪ್ರಾಧಿಕಾರ ಭರವಸೆ ನೀಡಿದೆ. ಅದೇ ರೀತಿ ತಮಿಳುನಾಡು ಅವರು ಇಂಟರ್ ಲಿಂಕಿಂಗ್ ಯೋಜನೆ ಬಗ್ಗೆ ಚರ್ಚೆ ಮಾಡಲು ಮುಂದಾಗಿದೆ. ಈ ಯೋಜನೆಗೆ ಕರ್ನಾಟಕದ ಆಕ್ಷೇಪ ಇದೆ. ಮುಂದಿನ ಸಭೆಯಲ್ಲಿ ಈ ಎರಡೂ ಯೋಜನೆಗಳು ಚರ್ಚೆಗೆ ಬರಬಹುದು ಎಂದು ರಾಕೇಶ್ ಸಿಂಗ್ ಹೇಳಿದರು.
ಈ ಮಧ್ಯೆ, ಮಂಡ್ಯದಲ್ಲಿ ರೈತರ ಹೋರಾಟ ಮುಂದುವರಿದಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಭರವಸೆ ನೀಡದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…