ರಾಜ್ಯ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ತಮಿಳುನಾಡಿಗೆ 2600 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ

ನವದೆಹಲಿ : ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿಹಿಡಿರುವ ಪ್ರಾಧಿಕಾರ, ನವೆಂಬರ್ 23ರ ವರೆಗೆ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ ನೀಡಿದೆ.

ಇದರೊಂದಿಗೆ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ತಮಿಳುನಾಡಿಗೆ 2,600 ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸೂಚನೆ ನೀಡಿತ್ತು.

ಸಭೆಯ ಬಳಿಕ ಮಾಹಿತಿ ನೀಡಿದ ಎಸಿಎಸ್ ರಾಕೇಶ್ ಸಿಂಗ್, ನವೆಂಬರ್ 23 ರ ತನಕ 2600 ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಆದೇಶಿಸಿದೆ. ತಮಿಳುನಾಡು 13,000 ಕ್ಯೂಸೆಕ್ ನೀರು ಬಿಡಲು ಆಗ್ರಹಿಸಿತು ಎಂದರು.

ಇವತ್ತು ಮೇಕೆದಾಟು ವಿಚಾರವಾಗಿ ಸಕಾರಾತ್ಮಕ ಬೆಳವಣಿಗೆ ಆಗಿದೆ. ಮೇಕೆದಾಟು ಯೋಜನೆ ಚರ್ಚೆಗೆ ಪ್ರತ್ಯೇಕ ದಿನಾಂಕ ನಿಗದಿ ಮಾಡಲು ಪ್ರಾಧಿಕಾರ ಒಪ್ಪಿದೆ. ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪ್ರಾಧಿಕಾರ ಭರವಸೆ ನೀಡಿದೆ. ಅದೇ ರೀತಿ ತಮಿಳುನಾಡು ಅವರು ಇಂಟರ್ ಲಿಂಕಿಂಗ್ ಯೋಜನೆ ಬಗ್ಗೆ ಚರ್ಚೆ ಮಾಡಲು ಮುಂದಾಗಿದೆ. ಈ ಯೋಜನೆಗೆ ಕರ್ನಾಟಕದ ಆಕ್ಷೇಪ ಇದೆ. ಮುಂದಿನ ಸಭೆಯಲ್ಲಿ ಈ ಎರಡೂ ಯೋಜನೆಗಳು ಚರ್ಚೆಗೆ ಬರಬಹುದು ಎಂದು ರಾಕೇಶ್ ಸಿಂಗ್ ಹೇಳಿದರು.

ಈ ಮಧ್ಯೆ, ಮಂಡ್ಯದಲ್ಲಿ ರೈತರ ಹೋರಾಟ ಮುಂದುವರಿದಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಭರವಸೆ ನೀಡದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

34 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago