ರಾಜ್ಯ

ಕೊಲೆ ಪ್ರಕರಣ | ನಟ ದರ್ಶನ್‌ ಮತ್ತೊಂದು ಶಾಕ್‌ ನೀಡಿದ ಸುಪ್ರೀಂ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನ್ಮವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಜು.22ಕ್ಕೆ ಮುಂದೂಡಿದೆ.

ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠವು ಚಿತ್ರನಟ ದರ್ಶನ್‌ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಕಾರಣಗಳನ್ನು ಮಾತ್ರ ಹೇಳಿ. ನಾವು ಬೇರೆ ಯಾವುದನ್ನೂ ಕೇಳುತ್ತಿಲ್ಲ ಎಂದು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.

ದರ್ಶನ್‌ ಹಾಗೂ ಆರೋಪಿಗಳ ಬಂಧನ ಕಾನೂನುಬದ್ಧವಾಗಿಲ್ಲ ಎನ್ನುವುದಾದರೆ ಅದಕ್ಕೆ ಉತ್ತರ ಕೊಡಿ ಎಂದು ಸರ್ಕಾರದ ಪರ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿ ಜು.22 ಕ್ಕೆ ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದೆ.
ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥಾ ವಾದ ಮಂಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್‌ ಪರ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ಹಾಜರಿದ್ದರು.
ಮುಂದಿನ ಅರ್ಜಿ ವಿಚಾರಣೆಯಲ್ಲಿ ಮನುಸಿಂಘ್ವಿ ಗೈರುಹಾಜರಾಗಲಿದ್ದು, ಅವರ ಪರ ಮತ್ತೊಬ್ಬ ಹಿರಿಯ ವಕೀಲ ಕಪಿಲ್‌ ಸಿಬಾಲ್‌ ಹಾಜರಾಗಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಗೆಳತಿ ಪವಿತ್ರಗೌಡ, ದರ್ಶನ್‌ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಸುಮಾರು 2 ತಿಂಗಳುಗಳ ಕಾಲ ಎಲ್ಲರೂ ಜೈಲು ಸೇರಿದ್ದರು. ಸುದೀರ್ಘ ವಿಚಾರಣೆ, ವಾದ-ಪ್ರತಿವಾದದ ನಂತರ ಕರ್ನಾಟಕ ಹೈಕೋರ್ಟ್‌ ಕಳೆದ ಡಿಸೆಂಬರ್‌ನಲ್ಲಿ ಎಲ್ಲಾ ಆರೋಪಿಗಳಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನ್ಯಾಯಾಲಯದಿಂದ ಜಾಮೀನು ಸಿಕ್ಕರೂ ಪ್ರಕರಣದ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲಿಸರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ವಿದೇಶಕ್ಕೆ ತೆರಳಲು ದರ್ಶನ್‌ಗೆ ನ್ಯಾಯಾಲಯ ಷರತ್ತಬದ್ಧ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ದರ್ಶನ್‌ ಡೆವಿಲ್‌ ಚಿತ್ರೀಕರಣಕ್ಕಾಗಿ ಥಾಯ್ಲಾಂಡ್‌ಗೆ ತೆರಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

18 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

21 hours ago