ರಾಜ್ಯ

ಜೈಲಿನಲ್ಲಿರುವ ದರ್ಶನ್‌ಗೆ ಮತ್ತೊಂದು ಶಾಕ್:‌ ಏನದು ಗೊತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತಷ್ಟು ಕಠಿಣ ಶಿಕ್ಷೆ ಶುರುವಾಗಿದೆ.

ಬ್ಯಾರಕ್‌ನಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಿನ ಅಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಜೈಲು ಅಧೀಕ್ಷಕರಾಗಿ ನೇಮಕವಾಗಿರುವ ಅಂಶಕುಮಾರ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ.

ಇಷ್ಟು ದಿನ ಬ್ಯಾರಕ್‌ನಲ್ಲಿ ಊಟ ಪಡೆದುಕೊಳ್ಳುತ್ತಿದ್ದ ದರ್ಶನ್‌ ಎಲ್ಲಾ ಆರೋಪಿಗಳಂತೆ ಸರತಿ ಸಾಲಿನಲ್ಲಿಯೇ ನಿಂತು ಊಟ ಪಡೆಯುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಜೈಲು ಅಧೀಕ್ಷಕರು ಎಲ್ಲಾ ಕೈದಿಗಳಿಗೂ ಒಂದೇ ನಿಯಮ ಜಾರಿ ಮಾಡಿದ್ದಾರೆ. ಇದರಿಂದಾಗಿ ದರ್ಶನ್‌ ಬ್ಯಾರಕ್‌ನಿಂದ ಹೊರಗೆ ಬಂದು ಎಲ್ಲರಂತೆ ಊಟ ಪಡೆದುಕೊಂಡು ಊಟ ಮುಗಿಸಿ ಬ್ಯಾರಕ್‌ಗೆ ಹೋಗಬೇಕಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

48 mins ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

51 mins ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

57 mins ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

1 hour ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

1 hour ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

1 hour ago