Categories: ರಾಜ್ಯ

ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ, ಕನಕ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕನಕದಾಸರ 500ನೇ ಜಯಂತೋತ್ಸವವನ್ನು ಆಚರಿಸುವ ಅವಕಾಶ ನನಗೆ ಸಿಕ್ಕಿತ್ತು. ಆ ಸಂದರ್ಭದಲ್ಲಿ ಕನಕದಾಸರ ಕೀರ್ತನೆಗಳನ್ನು ಸುಲಭವಾಗಿ ಜನರ ಕೈಗೆ ತಲುಪಿಸುವ ಕಾರ್ಯವನ್ನು ಮಾಡಲಾಗಿತ್ತು ಎಂದು ಸ್ಮರಿಸಿದರು.

ಕನಕಶ್ರೀ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ. ಕನಕದಾಸರ ಸಾಮಾಜಿಕ ಸಂದೇಶದ ಮೇಲೆ ಕೆಲಸ ಮಾಡುವುದಷ್ಟೆ ಮುಖ್ಯ ಎಂದರು.

ಬಸವಾದಿ ಶರಣರು, ಕನಕದಾಸರು ಇಬ್ಬರೂ ಮನುಷ್ಯರನ್ನು ವಿಭಜಿಸುವ ಜಾತಿ-ಧರ್ಮದ ತಾರತಮ್ಯವನ್ನು ವಿರೋಧಿಸಿದ್ದರು. ವಚನ ಚಳವಳಿಗೂ ಮೊದಲು ಜನರಿಗೆ ಅರ್ಥ ಆಗದ ಭಾಷೆಯಲ್ಲಿ ಧರ್ಮ‌ ಪ್ರಚಾರ ನಡೆಯುತ್ತಿತ್ತು. ಜನರಿಗೆ ಅರ್ಥವಾಗದ ಸಂಸ್ಕೃತ ಶ್ಲೋಕಗಳನ್ನು ಮುಟ್ಟದ ಬಸವಾದಿ ಶರಣರು ಜನರಿಗೆ ಅರ್ಥವಾಗುವ ಜನರ ಭಾಷೆಯಲ್ಲೇ ಅತ್ಯಂತ ಸರಳವಾಗಿ ಮಾನವೀಯ ಧರ್ಮವನ್ನು ಹೇಳಿದರು. ಮನುಷ್ಯ ನಿರ್ಮಿತ ಜಾತಿ ತಾರತಮ್ಯವನ್ನು, ಧಾರ್ಮಿಕ ತಾರತಮ್ಯವನ್ನು ಅಳಿಸಲು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಮುನ್ನಡೆಸಿದ ಮಾನವೀಯ ಧರ್ಮವನ್ನು 15 ನೇ ಶತಮಾನದಲ್ಲಿ ಕನಕದಾಸರು ಮುಂದುವರೆಸಿದರು.

ಬುದ್ದ, ಬಸವ, ಕನಕದಾಸರು, ಅಂಬೇಡ್ಕರ್ ಅವರ ಆಶಯಗಳೆಲ್ಲಾ ಒಂದೇ ಆಗಿದ್ದವು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಮನುಷ್ಯ ತಾರತಮ್ಯಗಳನ್ನು ನಿವಾರಿಸಲು ಶ್ರಮಿಸಿದರು ಎಂದು ವಿವರಿಸಿದರು.

ವಿದ್ಯಾವಂತರಾದಷ್ಟೂ ಜಾತಿವಾದಿಗಳಾದರೆ ಆ ವಿದ್ಯೆಗೆ ಗೌರವ ಬರುತ್ತದಾ? ಸಂವಿಧಾನವನ್ನು ವಿರೋಧಿಸುವವರೂ ಈಗ ತಲೆ ಎತ್ತಿದ್ದಾರೆ. ಸಂವಿಧಾನ ವಿರೋಧಿಗಳು ನಿಜವಾದ ಮನುಷ್ಯ ವಿರೋಧಿಗಳು ಎಂದರು.

ಮನುಷ್ಯ ಮನುಷ್ಯರನ್ನು ಜಾತಿ, ಧರ್ಮದ ಹೆಸರಲ್ಲಿ, ಮೇಲು-ಕೀಳು ಎನ್ನುವ ತಾರತಮ್ಯವನ್ನು ತ್ಯಜಿಸಿ ಮನುಷ್ಯರನ್ನು ಪ್ರೀತಿಸುವುದೇ ಕನಕದಾಸರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದರು.

ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮಿಗಳ‌ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕರಾದ ಬಂಜಗೆರೆ ಜಯಪ್ರಕಾಶ್ ಅವರು ವಿಶೇಷ ಉಪನ್ಯಾಸ ನೀಡಿದರು. ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇಲಾಖೆ ಪ್ರಕಟಣೆಗಳಿಗೆ ಶೇ50 ರಿಯಾಯ್ತಿ ನೀಡಿ: ಸಿಎಂ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಎಲ್ಲಾ ಅಕಾಡೆಮಿಗಳು ಮತ್ತು ಪ್ರಾಧಿಕಾರಿಗಳು ಪ್ರಕಟಿಸುವ ಪುಸ್ತಕಗಳನ್ನು ವಿಶೇಷ ಸಂದರ್ಭಗಳಲ್ಲಿ ಶೇ50 ರಷ್ಟು ರಿಯಾಯ್ತಿ ದರದಲ್ಲಿ ಮಾರಾಟ ಮಾಡುವಂತೆ ಇದೇ ಸಂದರ್ಭದಲ್ಲಿ ಘೋಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

13 seconds ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

42 mins ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

2 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

3 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

3 hours ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

3 hours ago