ಕೋಲ್ಕತ್ತಾ: ಆರ್ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶಾದ್ಯಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎಚ್ಚೆತ್ತುಕೊಂಡಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದ್ದು, ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದೆ.
ರಾಜ್ಯ ಕಾನೂನು ಸಚಿವ ಮೊಲೊಯ್ ಘಾಟಕ್ ಅವರು, ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದರು. ಮಸೂದೆಯಲ್ಲಿ ಅತ್ಯಾಚಾರ ಮತು ಬಲಿಪಶುವಿನ ಮರಣದ ತಪ್ಪಿತಸ್ಥರಿಗೆ ಮರಣ ದಂಡನೆ ನೀಡಲು ಅವಕಾಶವಿದೆ.
ಇದರ ಜೊತೆಗೆ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರಿಗೆ ಜಾಮೀನು ರಹಿತ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಸದನದಲ್ಲಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, ಈ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿ, ಅತ್ಯಾಚಾರ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.
ಬಳಿಕ ಮಾತನಾಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯಪಾಲ ಸಿವಿ ಆನಂದ ಬೋಸ್ರನ್ನು ಒತ್ತಾಯಿಸುವಂತೆ ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…