ಮಂಗಳೂರು: ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ಆಫರ್ ಮಾಡಿದ್ದರು ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ನವರೇ ಕೋಟಿ ಕೋಟಿ ಲಂಚ ನೀಡುವ ಆಫರ್ ನೀಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಈಗ ಮಾಡಿರುವ ಆರೋಪ ಸುಳ್ಳು. ವಿಜಯೇಂದ್ರ ಯಾವುದೇ ರೀತಿಯ ಹಣದ ಬೇಡಿಕೆ ಇಟ್ಟಿಲ್ಲ. ಸರ್ಕಾರ ತನಿಖೆ ಮಾಡಬೇಕೆಂದು ವಿಜಯೇಂದ್ರ ಅವರನ್ನು ಒತ್ತಾಯಿಸಿದ್ದೆ. ಆದರೆ ಹಣದ ಬೇಡಿಕೆ ಇಟ್ಟಿಲ್ಲ. ಈ ವರದಿಯನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಎಲ್ಲರ ವಿರುದ್ಧ ಕಿಡಿಕಾರಿದ್ದು ಸತ್ಯ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಹೇಳಿದ ರೀತಿ ಸಿಬಿಐಗೆ ವಹಿಸಲಿ. ಆಗ ಎಲ್ಲವೂ ಹೊರ ಬರುತ್ತದೆ ಎಂದು ಆಗ್ರಹಿಸಿದರು.
ಈ ವರದಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಬಹಳಷ್ಟು ಪತ್ರ ಬರೆದಿದ್ದೇನೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖಾ ಸಂಸ್ಥೆಗೆ ಹಸ್ತಾಂತರಿಸಬೇಕು ಎಂದು ಕೇಳಿಕೊಂಡಿದ್ದೆ ಅಷ್ಟೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತೂ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ಆ ಸಮುದಾಯಕ್ಕೆ ಏನಾದರೂ ಮಾಡಬೇಕೆಂಬ ಮನಸ್ಸಿದ್ದರೆ ನಾನು ಕೊಟ್ಟ ವರದಿಯನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಲಿ ಎಂದು ಒತ್ತಾಯಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…