ರಾಜ್ಯ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪøಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

2 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

2 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

3 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

5 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

6 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

8 hours ago