ರಾಜ್ಯ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪøಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago