Mysore
30
scattered clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ ಅನುದಾನ ನೀಡಿರುವ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಈ ವೇಳೆ ಸಚಿವ ಶರಣ ಪ್ರಕಾಶ ಪಾಟೀಲ್‌ ಮಾತನಾಡಿ, 2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4331 ಕೋಟಿ ರೂ ಅನುದಾನದಲ್ಲಿ 3099 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 3005 ಕೋಟಿ ವೆಚ್ಚ ಅಗಿದ್ದು, ಶೇಡಕಾ 96.97 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ ಅನುಮೋದನೆಯಾಗಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಗದಗ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ಯಾನ್ಸರ್‌ ಹೆಚ್ಚಳವಾಗಲು ಕಾರಣ ಕುರಿತು ಸುದೀರ್ಘ ಅಧ್ಯಯನ ನಡೆಸಬೇಕು. ಕ್ಯಾನ್ಸರ್‌ಗೆ ಅಂತರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆಯನ್ನು ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

 

Tags:
error: Content is protected !!