bjp
ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.
ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ
ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ
ಹಾಸನ – ಸಿದ್ದೇಶ್ ನಾಗೇಂದ್ರ
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…