ರಾಜ್ಯ

ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ : ಯಾರಿಗೆಲ್ಲಾ ಅವಕಾಶ?

ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.

ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ
ಹಾಸನ – ಸಿದ್ದೇಶ್ ನಾಗೇಂದ್ರ
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)

ಆಂದೋಲನ ಡೆಸ್ಕ್

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

37 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

1 hour ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

1 hour ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago